ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ. ಹುಬ್ಬಳ್ಳಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಅಕ್ರಮ ಜೂಜು ಅಡ್ಡೆಮೇಲೆ ದಾಳಿ ನಡೆಸಿ 27 ಜನರನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಹೆಬಸೂರು, ಕೀರೆಸೂರು ಹಾಗೂ ಮಾವನೂರು ಗ್ರಾಮದಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರುಗೇಶ ಚೆನ್ನಣ್ಣವರ ನೇತೃತ್ವದ ತಂಡ ದಾಳಿ ನಡೆಸಿ ಒಟ್ಟು 27 ಆರೋಪಿಗಳನ್ನು ಬಂಧಿಸಿ ಅವರಿಂದ 40 ಸಾವಿರ ಹಣವನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ದಾಳಿಯಲ್ಲಿ ಪಿಎಸ್ಐ ಸಚಿನ್ ಅಲ್ಮೆಲಕರ್, ಅಭಿಜಿತ್ ಹಾಗೂ ಸಿಬ್ಬಂದಿಗಳಾದ ಹೊನ್ನಪ್ಪನವರ್, ಕಾಕರ್, ಚೆನ್ನಪ್ಪ, ಮಹಾಂತೇಶ್, ಗಿರೀಶ್, ಸುಣಗಾರ, ಯಮನುರ್ ಹಾಗೂ ಸಂಶಿ ಅವರು ಪಾಲ್ಗೊಂಡಿದ್ದು ಇವರ ಕಾರ್ಯಕ್ಕೆ ಇದೀಗ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.