ಹುಬ್ಬಳ್ಳಿ: ದ್ವಿಚಕ್ರ ವಾಹನ ಸ್ಕಿಡ್ ಆಗಿ ಬಿದ್ದು, ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಎಪಿಎಂಸಿ ದರ್ಗಾ ಬಳಿ ನಡೆದಿದೆ. ಬಸವರಾಜ್ ಈರಣ್ಣ ತೋಟಗಿ ಮೃತಪಟ್ಟ ವ್ಯಕ್ತಿ. ಹುಬ್ಬಳ್ಳಿಯ ನವನಗರದ ಪ್ರಜಾ ನಗರ ನಿವಾಸಿ ಎಂದು ಗುರುತಿಸಲಾಗಿದೆ.

ಮೃತರು, ಹುಬ್ಬಳ್ಳಿಯಿಂದ ಧಾರವಾಡ ಕಡೆ ಆಕ್ಟಿವ್ ಹೊಂಡಾ ದ್ವಿಚಕ್ರ ವಾಹನದ ಮೇಲೆ ತೆರಳುತ್ತಿದ್ದರು, ನಿಯಂತ್ರಣ ಕಳೆದುಕೊಂಡು ಡಿವೆಡೆರ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿಯ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.