ಹುಬ್ಬಳ್ಳಿ: ಕಸ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ವಾಹನಕ್ಕೆ ಹಿಂಬದಿಯಿಂದ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಗರದ ಕಿಮ್ಸ್ ಹಿಂದಿನ ಗೇಟ್ ಸಿಲ್ಲಿ ಪಾಯಿಂಟ್ ಬಳಿಯಲ್ಲಿ ನಡೆದಿದೆ.

ಟ್ಯುಶನ್ ಕ್ಲಾಸ್ ತೆರಳುತ್ತಿರುವಾಗ ಈ ಘಟನೆ ನಡೆದಿದ್ದು, ಅದ್ವೈತ ಬಾಗಲಕೋಟ (19) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಸ್ಕೂಟಿ ಹಿಂಬದಿ ಕುಳಿತಿದ್ದ ವಿವೇಕ್ ಗುಡಿ (19) ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಯುವಕನ ಶವವನ್ನು ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.